ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಈ ವಾರ ತೆರೆ ಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಸಂಜೆಯ ಒಳಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಬೇಕು.ಇಲ್ಲದೇ ಇದ್ದರೆ ಶನಿವಾರ ಶಿಸ್ತುಕ್ರಮವಾಗಲಿದೆ ಎಂದು ಬಿಜೆಪಿ ಹಾಗೂ ಸಂಘಪರಿವಾರದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಹಕಾರಿ ನಿಯಮದ ಪ್ರಕಾರ ಅಧ್ಯಕ್ಷ ಹಾಗೂ ನಿರ್ದೇಶಕರು ರಾಜೀನಾಮೆಯನ್ನು ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಬೇಕು. ಆ ಬಳಿಕ ರಾಜೀನಾಮೆ ಪ್ರಕ್ರಿಯೆ ನಡೆಯಲಿದೆ. ಆದರೆ ಆರಂಭದ ಹಂತದಲ್ಲಿ ರಾಜೀನಾಮೆ ಪತ್ರವನ್ನು ಸಂಘಪರಿವಾರ ಅಥವಾ ಬಿಜೆಪಿ ಪ್ರಮುಖರಲ್ಲಿ ನೀಡಲು ಸೂಚನೆ ನಿಡಲಾಗಿದೆ ಎಂದು ತಿಳಿದುಬಂದಿದ್ದು ಈ ಹಿನ್ನೆಲೆಯಲ್ಲಿ 3 ಮಂದಿ ಪಕ್ಷದ ಪ್ರಮುಖರಲ್ಲಿ ಗುರುವಾರವೇ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದುಬಂದಿದೆ. ಉಳಿದವರು ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. ಒಂದು ವೇಳೆ ರಾಜೀನಾಮೆ ನೀಡದೇ ಇದ್ದರೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವುದು ಹಾಗೂ ಅಗತ್ಯ ಬಿದ್ದರೆ ಉಚ್ಛಾಟನೆ ಕೂಡಾ ನಡೆಯಲಿದೆ, ರಾಜೀನಾಮೆ ನೀಡದೇ ಸಹಕಾರಿ ಸಂಘದ ಎಲ್ಲಾ ನಿರ್ದೇಶಕರು ಬೆಂಬಲ ವ್ಯಕ್ತಪಡಿಸಿದರೆ ಇಡೀ ಸಹಕಾರಿ ಸಂಘವೇ ಬಿಜೆಪಿ ಅಥವಾ ಸಹಕಾರಿ ಭಾರತಿ ತೆಕ್ಕೆಯಿಂದ ಹೋದರೂ ಚಿಂತೆ ಇಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ, ಅದೂ ಇಲ್ಲದೇ ಹೋದರೆ ಅವಿಶ್ವಾಸ ನಿರ್ಣಯದ ಮಾರ್ಗವಿದ್ದರೆ ಅದನ್ನೂ ಉಳಿದ ನಿರ್ದೇಶಕರು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಬಿಜೆಪಿಯ ಸಂಘಟನಾತ್ಮಕ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿರಲಿಲ್ಲ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮದ ಪ್ರಶ್ನೆಗಳನ್ನು ಕಾರ್ಯಕರ್ತರು ಕೇಳಿದ್ದರು.ಇದೀಗ ಶನಿವಾರ ಅಂತಿಮವಾಗಿ ಶಿಸ್ತುಕ್ರಮವಾಗುವುದು ನಿಶ್ಚಿತವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…