ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಈ ವಾರ ತೆರೆ ಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಸಂಜೆಯ ಒಳಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಬೇಕು.ಇಲ್ಲದೇ ಇದ್ದರೆ ಶನಿವಾರ ಶಿಸ್ತುಕ್ರಮವಾಗಲಿದೆ ಎಂದು ಬಿಜೆಪಿ ಹಾಗೂ ಸಂಘಪರಿವಾರದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಹಕಾರಿ ನಿಯಮದ ಪ್ರಕಾರ ಅಧ್ಯಕ್ಷ ಹಾಗೂ ನಿರ್ದೇಶಕರು ರಾಜೀನಾಮೆಯನ್ನು ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಬೇಕು. ಆ ಬಳಿಕ ರಾಜೀನಾಮೆ ಪ್ರಕ್ರಿಯೆ ನಡೆಯಲಿದೆ. ಆದರೆ ಆರಂಭದ ಹಂತದಲ್ಲಿ ರಾಜೀನಾಮೆ ಪತ್ರವನ್ನು ಸಂಘಪರಿವಾರ ಅಥವಾ ಬಿಜೆಪಿ ಪ್ರಮುಖರಲ್ಲಿ ನೀಡಲು ಸೂಚನೆ ನಿಡಲಾಗಿದೆ ಎಂದು ತಿಳಿದುಬಂದಿದ್ದು ಈ ಹಿನ್ನೆಲೆಯಲ್ಲಿ 3 ಮಂದಿ ಪಕ್ಷದ ಪ್ರಮುಖರಲ್ಲಿ ಗುರುವಾರವೇ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದುಬಂದಿದೆ. ಉಳಿದವರು ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. ಒಂದು ವೇಳೆ ರಾಜೀನಾಮೆ ನೀಡದೇ ಇದ್ದರೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವುದು ಹಾಗೂ ಅಗತ್ಯ ಬಿದ್ದರೆ ಉಚ್ಛಾಟನೆ ಕೂಡಾ ನಡೆಯಲಿದೆ, ರಾಜೀನಾಮೆ ನೀಡದೇ ಸಹಕಾರಿ ಸಂಘದ ಎಲ್ಲಾ ನಿರ್ದೇಶಕರು ಬೆಂಬಲ ವ್ಯಕ್ತಪಡಿಸಿದರೆ ಇಡೀ ಸಹಕಾರಿ ಸಂಘವೇ ಬಿಜೆಪಿ ಅಥವಾ ಸಹಕಾರಿ ಭಾರತಿ ತೆಕ್ಕೆಯಿಂದ ಹೋದರೂ ಚಿಂತೆ ಇಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ, ಅದೂ ಇಲ್ಲದೇ ಹೋದರೆ ಅವಿಶ್ವಾಸ ನಿರ್ಣಯದ ಮಾರ್ಗವಿದ್ದರೆ ಅದನ್ನೂ ಉಳಿದ ನಿರ್ದೇಶಕರು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಬಿಜೆಪಿಯ ಸಂಘಟನಾತ್ಮಕ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿರಲಿಲ್ಲ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮದ ಪ್ರಶ್ನೆಗಳನ್ನು ಕಾರ್ಯಕರ್ತರು ಕೇಳಿದ್ದರು.ಇದೀಗ ಶನಿವಾರ ಅಂತಿಮವಾಗಿ ಶಿಸ್ತುಕ್ರಮವಾಗುವುದು ನಿಶ್ಚಿತವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…