ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.
ಈ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.
ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.