ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.
ಈ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.
ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…