ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಫಪರಿವಾರ ಹಾಗೂ ಸಹಕಾರ ಭಾರತಿಯು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾಗಹಿಸಿದ್ದ ಎಲ್ಲಾ 17 ಮಂದಿಯೂ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿತ್ತು.
ಈ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನಿರ್ದೇಶಕ ಪ್ರಸನ್ನ ಕೆ ಎಣ್ಮೂರು ಕ್ರಮಬದ್ದವಾಗಿ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕಾರ ಭಾರತಿಗೂ ರಾಜೀನಾಮೆ ನೀಡಿದ್ದರು. ಆದರೆ 10 ದಿನ ಕಳೆದರೂ ಪಕ್ಷದ ಕಡೆಯಿಂದ ಹಾಗೂ ಸಂಘಪರಿವಾರದ ಕಡೆಯಿಂದ ಯಾವುದೇ ಸೂಚನೆ ಹಾಗೂ ಇತರ ಯಾರೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ ರಾಜೀನಾಮೆಯನ್ನು ಸ್ವ ಇಚ್ಛೆಯಿಂದ ವಾಪಾಸ್ ಪಡೆಯುವುದಾಗಿ ಕಾರ್ಯನಿರ್ವಹಣಾಧಿಕಾರಿಯವರಿಗೆ ಪತ್ರ ನೀಡಿದ್ದಾರೆ.
ಪಕ್ಷ ಹಾಗೂ ಸಂಘಪರಿವಾರ ನೀಡಿದ ಸೂಚನೆಯನ್ನು ಯಾರೂ ಪಾಲನೆ ಮಾಡದೇ ಇರುವುದರಿಂದ ತಾನು ಕೂಡಾ ರಾಜೀನಾಮೆ ವಾಪಾಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…