Advertisement
ಸುದ್ದಿಗಳು

ಅಡ್ಡಹೊಳೆ-ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ- ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ

Share

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಪೂರ್ಣ ಹದಗೆಟ್ಟಿರುವ ಅಡ್ಡಹೊಳೆಯಿಂದ ಬಿ.ಸಿ.ರೋಡ್ ತನಕ ರಸ್ತೆ ಮರು ಡಾಮರೀಕರಣ ನಡೆಸಿ ಅಭಿವೃದ್ಧಿಪಡಿಸಬೇಕು ಮತ್ತು ಅಡ್ಡಹೊಳೆ-ಬಿ.ಸಿ.ರೋಡ್ ಮಧ್ಯೆ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ತಿಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ 75ರ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ಅ.10ರಂದು ನೆಲ್ಯಾಡಿಯಲ್ಲಿ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮೂರು ವಾರದೊಳಗೆ ದುರಸ್ಥಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಮತ್ತು ಚತುಷ್ಪಥ ಕಾಮಗಾರಿ ಶೀಘ್ರ ಆರಂಭಿಸುವುದಾಗಿ ನೀಡಿದ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

Advertisement

ನೆಲ್ಯಾಡಿ ಗಾಂಧಿ ಮೈದಾನದಲ್ಲಿನ ಗಾಂಧಿ ಪ್ರತಿಮೆಗೆ ಹೋರಾಟ ಸಮಿತಿ ಅಧ್ಯಕ್ಷ ಫಾ.ವರ್ಗೀಸ್ ಕೈಪನಡ್ಕ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ವಿವಿಧ ಘೋಷಣೆ, ನಾಮಫಲಕಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ನೆಲ್ಯಾಡಿ ಪೇಟೆಗೆ ಆಗಮಿಸಿ ಬಳಿಕ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಫಾ.ವರ್ಗೀಸ್ ಕೈಪನಡ್ಕ, ಉಪಾಧ್ಯಕ್ಷ, ಅಬ್ರಹಾಂ ವರ್ಗೀಸ್, ಹೋರಾಟ ಸಮಿತಿ ಸದಸ್ಯ ಫಾ.ಆದರ್ಶ ಜೋಸೆಫ್, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವರ್ತಕ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ ಮಾತನಾಡಿದರು. ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ಕೋಶಾಧಿಕಾರಿ ಯು.ಪಿ.ವರ್ಗೀಸ್, ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆ ಉಷಾ ಅಂಚನ್, ಹೋರಾಟ ಸಮಿತಿ ಕಾರ್ಯದರ್ಶಿ ಜೋಸ್ ಕೆ.ಜೆ., ಉಪಾಧ್ಯಕ್ಷ ಸುಧೀರ್‍ಕುಮಾರ್, ಜೊತೆ ಕಾರ್ಯದರ್ಶಿಗಳಾದ ಮನೋಜ್ ವರ್ಗೀಸ್, ಜಯೇಶ್ ವಿ.ಜೆ., ಕೋಶಾಧಿಕಾರಿ ಒ.ಜಿ.ನೈನಾನ್, ಫಾ.ಹನಿ ಜೇಕಬ್, ಪ್ರಮುಖರಾದ ಸಯ್ಯದ್ ಮೀರಾ ಸಾಹೇಬ್ ಕಡಬ, ಕೆ.ಪಿ.ತೋಮಸ್, ಕೆ.ಕೆ.ಸೆಬಾಸ್ಟಿಯನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಕಾರ್ಯಕ್ರಮ ನಿರೂಪಿಸಿದರು.

ನೆಲ್ಯಾಡಿ ಭಾಗದ ವಿವಿಧ ಚರ್ಚ್‍ಗಳ ಧರ್ಮಗುರುಗಳು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನೆಲ್ಯಾಡಿ ಪೇಟೆಯಲ್ಲಿನ ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಧಿಕಾರಿಗಳ ಭರವಸೆ:
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿ ಕಾಮರಾಜ್‍  ಪ್ರತಿಭಟನಾಕಾರರಿಂದ ಅಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಹೊಂಡಗಳನ್ನು ಮುಚ್ಚಿ ದುರಸ್ಥಿ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ. ಮೂರು ವಾರಗಳ ಒಳಗಾಗಿ ರಸ್ತೆ ಸಂಪೂರ್ಣವಾಗಿ ದುರಸ್ಥಿ ಆಗಲಿದೆ. ಅಲ್ಲದೆ ಚತುಷ್ಫಥ ಕಾಮಗಾರಿಯನ್ನು ಶೀಘ್ರ ಪುನರಾರಂಭಿಸಲಾಗುವುದು ಎಂದರು.

ಬಿಗಿ ಬಂದೋಬಸ್ತ್:
ಪ್ರತಿಭಟನೆಯ ಹಿನ್ನೆಲೆಯಲ್ಲಿ ನೆಲ್ಯಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ಕರೆಸಿಕೊಂಡು ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಡಿವೈಎಸ್‍ಪಿ ದಿನಕರ ಶೆಟ್ಟಿ, ಉಪ್ಪಿನಂಗಡಿ ಎಸ್.ಐ.ನಂದಕುಮಾರ್‍ರವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

9 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

10 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

10 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

10 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago