Advertisement
ಸುದ್ದಿಗಳು

ಅಡ್ಡಹೊಳೆ-ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ- ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ

Share

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಪೂರ್ಣ ಹದಗೆಟ್ಟಿರುವ ಅಡ್ಡಹೊಳೆಯಿಂದ ಬಿ.ಸಿ.ರೋಡ್ ತನಕ ರಸ್ತೆ ಮರು ಡಾಮರೀಕರಣ ನಡೆಸಿ ಅಭಿವೃದ್ಧಿಪಡಿಸಬೇಕು ಮತ್ತು ಅಡ್ಡಹೊಳೆ-ಬಿ.ಸಿ.ರೋಡ್ ಮಧ್ಯೆ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ತಿಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ 75ರ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ಅ.10ರಂದು ನೆಲ್ಯಾಡಿಯಲ್ಲಿ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮೂರು ವಾರದೊಳಗೆ ದುರಸ್ಥಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಮತ್ತು ಚತುಷ್ಪಥ ಕಾಮಗಾರಿ ಶೀಘ್ರ ಆರಂಭಿಸುವುದಾಗಿ ನೀಡಿದ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ನೆಲ್ಯಾಡಿ ಗಾಂಧಿ ಮೈದಾನದಲ್ಲಿನ ಗಾಂಧಿ ಪ್ರತಿಮೆಗೆ ಹೋರಾಟ ಸಮಿತಿ ಅಧ್ಯಕ್ಷ ಫಾ.ವರ್ಗೀಸ್ ಕೈಪನಡ್ಕ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ವಿವಿಧ ಘೋಷಣೆ, ನಾಮಫಲಕಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ನೆಲ್ಯಾಡಿ ಪೇಟೆಗೆ ಆಗಮಿಸಿ ಬಳಿಕ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಫಾ.ವರ್ಗೀಸ್ ಕೈಪನಡ್ಕ, ಉಪಾಧ್ಯಕ್ಷ, ಅಬ್ರಹಾಂ ವರ್ಗೀಸ್, ಹೋರಾಟ ಸಮಿತಿ ಸದಸ್ಯ ಫಾ.ಆದರ್ಶ ಜೋಸೆಫ್, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ವರ್ತಕ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ ಮಾತನಾಡಿದರು. ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ಕೋಶಾಧಿಕಾರಿ ಯು.ಪಿ.ವರ್ಗೀಸ್, ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆ ಉಷಾ ಅಂಚನ್, ಹೋರಾಟ ಸಮಿತಿ ಕಾರ್ಯದರ್ಶಿ ಜೋಸ್ ಕೆ.ಜೆ., ಉಪಾಧ್ಯಕ್ಷ ಸುಧೀರ್‍ಕುಮಾರ್, ಜೊತೆ ಕಾರ್ಯದರ್ಶಿಗಳಾದ ಮನೋಜ್ ವರ್ಗೀಸ್, ಜಯೇಶ್ ವಿ.ಜೆ., ಕೋಶಾಧಿಕಾರಿ ಒ.ಜಿ.ನೈನಾನ್, ಫಾ.ಹನಿ ಜೇಕಬ್, ಪ್ರಮುಖರಾದ ಸಯ್ಯದ್ ಮೀರಾ ಸಾಹೇಬ್ ಕಡಬ, ಕೆ.ಪಿ.ತೋಮಸ್, ಕೆ.ಕೆ.ಸೆಬಾಸ್ಟಿಯನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಕಾರ್ಯಕ್ರಮ ನಿರೂಪಿಸಿದರು.

ನೆಲ್ಯಾಡಿ ಭಾಗದ ವಿವಿಧ ಚರ್ಚ್‍ಗಳ ಧರ್ಮಗುರುಗಳು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನೆಲ್ಯಾಡಿ ಪೇಟೆಯಲ್ಲಿನ ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಧಿಕಾರಿಗಳ ಭರವಸೆ:
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿ ಕಾಮರಾಜ್‍  ಪ್ರತಿಭಟನಾಕಾರರಿಂದ ಅಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಹೊಂಡಗಳನ್ನು ಮುಚ್ಚಿ ದುರಸ್ಥಿ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ. ಮೂರು ವಾರಗಳ ಒಳಗಾಗಿ ರಸ್ತೆ ಸಂಪೂರ್ಣವಾಗಿ ದುರಸ್ಥಿ ಆಗಲಿದೆ. ಅಲ್ಲದೆ ಚತುಷ್ಫಥ ಕಾಮಗಾರಿಯನ್ನು ಶೀಘ್ರ ಪುನರಾರಂಭಿಸಲಾಗುವುದು ಎಂದರು.

ಬಿಗಿ ಬಂದೋಬಸ್ತ್:
ಪ್ರತಿಭಟನೆಯ ಹಿನ್ನೆಲೆಯಲ್ಲಿ ನೆಲ್ಯಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ಕರೆಸಿಕೊಂಡು ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಡಿವೈಎಸ್‍ಪಿ ದಿನಕರ ಶೆಟ್ಟಿ, ಉಪ್ಪಿನಂಗಡಿ ಎಸ್.ಐ.ನಂದಕುಮಾರ್‍ರವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

5 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

6 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

12 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

13 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

15 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

15 hours ago