ಸುಳ್ಯ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯಲ್ಲಿ 7 ಮಂದಿ ಅಡ್ಡ ಮತದಾನ ಮಾಡಿರುವುದು ಖಚಿತ. ಆದರೆ ಅಡ್ಡ ಮತದಾನ ಮಾಡಿದವರು ಯಾರು ಎಂದು ಪತ್ತೆ ಹಚ್ಚಲು ಸಾಧ್ಯವಾಗದ ಹಿನ್ನಲೆಯಲ್ಲಿ ಮತದಾನಕ್ಕೆ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ಪ್ರಸ್ತುತ ನಿರ್ವಹಿಸುವ ಹುದ್ದೆಗಳಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಲಾಗಿದೆ. ಎಲ್ಲರೂ ರಾಜಿನಾಮೆ ನೀಡಲಿದ್ದು 5 ಮಂದಿ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೈವಸ್ಥಾನದಲ್ಲಿ ಪ್ರಮಾಣ ಮಾಡಿರುವುದು ನಮ್ಮ ಭಾವನಾತ್ಮಕ ವಿಷಯ. ಎಲ್ಲರ ಸಮ್ಮುಖದಲ್ಲಿ ಆದ ನಿರ್ಣಯದಂತೆ ಪ್ರಮಾಣ ಮಾಡಲು ಸೂಚನೆ ನೀಡಿದ್ದೆವು. ಆದರೆ ಪ್ರಮಾಣ ಮಾಡಿದಾಗಲೂ ಅಡ್ಡಮತದಾನ ಮಾಡಿದವರು ಒಪ್ಪಿಕೊಳ್ಳದ ಕಾರಣ ರಾಜೀನಾಮೆ ಕೇಳುವುದು ಅನಿವಾರ್ಯವಾಯಿತು ಎಂದು ಅವರು ಹೇಳಿದರು. ಅಡ್ಡ ಮತದಾನ ಮಾಡಿರುವುದರಿಂದ ಪಕ್ಷದ ಮತ್ತು ಸಂಘಟನೆಯ ವರ್ಚಸ್ಸಿಗೆ ಧಕ್ಕೆಯಾಗಿದೆ. ಕಾರ್ಯಕರ್ತರಿಗೆ ನೋವಾಗಿದೆ. ಆದುದರಿಂದ ಎಲ್ಲರೂ ತಮ್ಮ ಹುದ್ದೆಗೆ ರಾಜಿನಾಮೆ ನೀಡಬೇಕು ಮತ್ತು ಆ ಸ್ಥಾನಕ್ಕೆ ಹೊಸಬರಿಗೆ ಅವಕಾಶ ನೀಡಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು. ಇವರೆಲ್ಲರಿಗೂ ಪಕ್ಷ ಸ್ಥಾನ ಮತ್ತು ಜವಾಬ್ದಾರಿಯನ್ನು ನೀಡಿದೆ. ಇದೀಗ ಇಂತಹ ಸಂದರ್ಭ ಎದುರಾದ ಕಾರಣ ಪಕ್ಷ ಎಲ್ಲರ ರಾಜಿನಾಮೆ ಕೇಳಬೇಕಾಗಿ ಬಂದಿದೆ. ಎಲ್ಲರೂ ರಾಜಿನಾಮೆ ನೀಡುವ ವಿಶ್ವಾಸವಿದೆ ಎಂದು ಅವರು ವಿವರಿಸಿದರು.
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…