ಸುಳ್ಯ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯಲ್ಲಿ 7 ಮಂದಿ ಅಡ್ಡ ಮತದಾನ ಮಾಡಿರುವುದು ಖಚಿತ. ಆದರೆ ಅಡ್ಡ ಮತದಾನ ಮಾಡಿದವರು ಯಾರು ಎಂದು ಪತ್ತೆ ಹಚ್ಚಲು ಸಾಧ್ಯವಾಗದ ಹಿನ್ನಲೆಯಲ್ಲಿ ಮತದಾನಕ್ಕೆ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ಪ್ರಸ್ತುತ ನಿರ್ವಹಿಸುವ ಹುದ್ದೆಗಳಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಲಾಗಿದೆ. ಎಲ್ಲರೂ ರಾಜಿನಾಮೆ ನೀಡಲಿದ್ದು 5 ಮಂದಿ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೈವಸ್ಥಾನದಲ್ಲಿ ಪ್ರಮಾಣ ಮಾಡಿರುವುದು ನಮ್ಮ ಭಾವನಾತ್ಮಕ ವಿಷಯ. ಎಲ್ಲರ ಸಮ್ಮುಖದಲ್ಲಿ ಆದ ನಿರ್ಣಯದಂತೆ ಪ್ರಮಾಣ ಮಾಡಲು ಸೂಚನೆ ನೀಡಿದ್ದೆವು. ಆದರೆ ಪ್ರಮಾಣ ಮಾಡಿದಾಗಲೂ ಅಡ್ಡಮತದಾನ ಮಾಡಿದವರು ಒಪ್ಪಿಕೊಳ್ಳದ ಕಾರಣ ರಾಜೀನಾಮೆ ಕೇಳುವುದು ಅನಿವಾರ್ಯವಾಯಿತು ಎಂದು ಅವರು ಹೇಳಿದರು. ಅಡ್ಡ ಮತದಾನ ಮಾಡಿರುವುದರಿಂದ ಪಕ್ಷದ ಮತ್ತು ಸಂಘಟನೆಯ ವರ್ಚಸ್ಸಿಗೆ ಧಕ್ಕೆಯಾಗಿದೆ. ಕಾರ್ಯಕರ್ತರಿಗೆ ನೋವಾಗಿದೆ. ಆದುದರಿಂದ ಎಲ್ಲರೂ ತಮ್ಮ ಹುದ್ದೆಗೆ ರಾಜಿನಾಮೆ ನೀಡಬೇಕು ಮತ್ತು ಆ ಸ್ಥಾನಕ್ಕೆ ಹೊಸಬರಿಗೆ ಅವಕಾಶ ನೀಡಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು. ಇವರೆಲ್ಲರಿಗೂ ಪಕ್ಷ ಸ್ಥಾನ ಮತ್ತು ಜವಾಬ್ದಾರಿಯನ್ನು ನೀಡಿದೆ. ಇದೀಗ ಇಂತಹ ಸಂದರ್ಭ ಎದುರಾದ ಕಾರಣ ಪಕ್ಷ ಎಲ್ಲರ ರಾಜಿನಾಮೆ ಕೇಳಬೇಕಾಗಿ ಬಂದಿದೆ. ಎಲ್ಲರೂ ರಾಜಿನಾಮೆ ನೀಡುವ ವಿಶ್ವಾಸವಿದೆ ಎಂದು ಅವರು ವಿವರಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…