Advertisement
Political mirror

ಅಡ್ಡ ಮತದಾನ ಪರಿಣಾಮ : ರಾಜೀನಾಮೆ ಪರ್ವ ಆರಂಭ

Share

ಸುಳ್ಯ: ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್‍ನ ಚುನಾವಣೆಯಲ್ಲಿ ಸುಳ್ಯ ತಾಲೂಕಿನ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಗಳಾಗಿ ಮತದಾನ ಮಾಡಿದ್ದ 17 ಮಂದಿಯೂ ರಾಜೀನಾಮೆ ನೀಡಲು ಬಿಜೆಪಿ, ಸಹಕಾರ ಭಾರತಿ ಹಾಗೂ ಸಂಘಪರಿವಾರ ಸೂಚನೆ ನೀಡಿದ ಬೆನ್ನಲ್ಲೇ ರಾಜೀನಾಮೆ ಪರ್ವ ಆರಂಭವಾಗಿದೆ.

ಎಸ್‍ಸಿಡಿಸಿಸಿ ಬ್ಯಾಂಕ್‍ನ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿಗೆ ಸೋಲಾದ ಬಳಿಕ ಶಿಸ್ತು ಕ್ರಮಕ್ಕೆ ಮುಂದಾದ ಸಹಕಾರ ಭಾರತಿ ಹಾಗೂ ಬಿಜೆಪಿ ಮತ್ತು ಸಂಘಪರಿವಾರ 17 ಮಂದಿಯೂ ರಾಜೀನಾಮೆ ನೀಡಲು ಸೂಚನೆ ನೀಡಿದೆ. ಹೀಗಾಗಿ ಈಗ ರಾಜೀನಾಮೆ ಪರ್ವ ಆರಂಭವಾಗಿದೆ.

ಈ ಸೂಚನೆಗೂ ಮುನ್ನವೇ ಅಭ್ಯರ್ಥಿಯಾಗಿದ್ದ ವೆಂಕಟ್ ದಂಬೆಕೋಡಿ ಅವರು  ನೈತಿಕ ಹೊಣೆ ಹೊತ್ತು  ತಾನು ನಿರ್ದೇಶಕನಾಗಿರುವ  ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದರು. ಈ ಮೂಲಕ ಮಾದರಿಯಾಗಿದ್ದರು.   ಇದೀಗ ಸಂಘಪರಿವಾರದಿಂದ ಸೂಚನೆ ಬಂದ ಬಳಿಕ  ಮುರುಳ್ಯ- ಎಣ್ಮೂರು ಸಹಕಾರಿ ಬ್ಯಾಂಕ್ ನಿರ್ದೇಶಕ ಪ್ರಸನ್ನ ಎಣ್ಮೂರು ಅವರು ಸಹಕಾರಿ ಸಂಘದ ಕಾರ್ಯದರ್ಶಿ ಅವರಿಗೆ ರಾಜಿನಾಮೆ ಪತ್ರ ನೀಡಿದ್ದಾರೆ. ಇದರ ಜೊತಗೆ ಸಹಕಾರಿ ಭಾರತಿಯ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ಜಿಲ್ಲಾ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ.

ಸಹಕಾರ ಭಾರತಿ ತಾಲೂಕು ಅಧ್ಯಕ್ಷ , ನೆಲ್ಲೂರು ಕೆಮ್ರಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಿಷ್ಣು ಭಟ್ ಅವರು ಸಹಕಾರಿ ಸಂಘದ ನಿರ್ದೇಶಕರ ಸಭೆ ಕರೆದು ರಾಜೀನಾಮೆ ನೀಡುವುದಾಗಿ “ಸುಳ್ಯನ್ಯೂಸ್.ಕಾಂ” ತಿಳಿಸಿದ್ದಾರೆ.

ಈ ಹೆಸರು ಹೇಳಲಿಚ್ಚಿಸದ ಮುಖಂಡರೊಬ್ಬರು, ಸಂಘಪರಿವಾರದ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮದ ಮೇಲೆ ನಂಬಿಕೆ ಇರುವ ಪಕ್ಷವು ಹಾಗಾದರೆ ಕಾನತ್ತೂರಿಗೆ ಬರಲು ಹೇಳಿ ಸತ್ಯದ ನುಡಿಯನ್ನು ಹೇಳಿಸಿದ್ದೇಕೆ ?, ಎಲ್ಲರನ್ನೂ ಸಂಶಯದಿಂದ ನೋಡುವುದೇಕೆ ? ಹಾಗಿದ್ದರೆ ದೈವ-ದೇವರ ಮೇಲೆಯೇ ನಂಬಿಕೆ ಇಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

8 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

8 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

18 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

18 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

19 hours ago