ಹೈದರಾಬಾದ್: ಹೈದರಾಬಾದ್ ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…