ಹೈದರಾಬಾದ್: ಹೈದರಾಬಾದ್ ಎನ್ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.
ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…