ಸುದ್ದಿಗಳು

ಅಧಿಕಾರದ ಹಿಂದೆ ಬಿದ್ದಿಲ್ಲ….. ಪಕ್ಷ ಸಂಘಟನೆಯಲ್ಲಿ ಸಕ್ರೀಯನಾಗುತ್ತೇನೆ – ಶಾಸಕ ಅಂಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ‌. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.

Advertisement
Advertisement

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.

ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು‌. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು‌.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

10 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago