ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.
ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…