ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.
ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…