ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.
ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…