ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.
ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…