ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.
ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು.
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…