ಸುದ್ದಿಗಳು

ಅಧಿಕಾರಿಗಳಿಂದ ಹಲ್ಲೆ ಆರೋಪ: ಸುಬ್ರಹ್ಮಣ್ಯ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡ,ಮಾನವಹಕ್ಕು ಹೋರಾಟ ಸಮಿತಿ, ಒಕ್ಕಲಿಗ ಗೌಡ ಸಮುದಾಯ ನೇತೃತ್ವದಲ್ಲಿ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.

Advertisement
Advertisement

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು. ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯಧಿಕಾರಿಗಳು ಬಂಧಿಸಿ, ಅವರಿಗೆ 25 ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಈ ಹಿಂದೆ ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆದು ಮನವಿ ಸಲ್ಲಿಸಲಾಗಿತ್ತು. ಆದರೂ ಅರಣ್ಯಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಮತ್ತೆ ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಬಿಳಿ ಕಾಗದಗಳಿಗೆ ಸಹಿ ಮಾಡಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಲೋಕೇಶ್ ಅವರಿಗೆ ಹಲ್ಲೆ ನಡೆಸಿದ ಅರಣ್ಯ ರಕ್ಷಕ  ಹಾಗೂ ಅವರಿಗೆ ಸಹಕರಿಸಿದ ಇತರ ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಮನವಿ ಮಾಡಲಾಗಿದೆ.ಇಲ್ಲದೇ ಹೋದಲ್ಲಿ ಮುಖ್ಯಮಂತ್ರಿ ನಿವಾಸ,ಗೃಹಸಚಿವರ ನಾಸ ಮುಂದೆ ಪ್ರತಿಭಟನೆ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

Advertisement

ಪೋಲಿಸ್ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ತಂಡದ ಸದಸ್ಯರು,ಮಾನವಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು,ಗೌಡ ಸಮುದಾಯದ ಸದಸ್ಯರು, ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಪೋಲಿಸರು ಭದ್ರತೆಯನ್ನು ಒದಗಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

55 minutes ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

1 hour ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

1 hour ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

1 hour ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

15 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

16 hours ago