Advertisement
ಸುದ್ದಿಗಳು

ಅಧಿಕಾರಿಗಳಿಂದ ಹಲ್ಲೆ ಆರೋಪ: ಸುಬ್ರಹ್ಮಣ್ಯ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ

Share

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡ,ಮಾನವಹಕ್ಕು ಹೋರಾಟ ಸಮಿತಿ, ಒಕ್ಕಲಿಗ ಗೌಡ ಸಮುದಾಯ ನೇತೃತ್ವದಲ್ಲಿ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು. ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯಧಿಕಾರಿಗಳು ಬಂಧಿಸಿ, ಅವರಿಗೆ 25 ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ಬಗ್ಗೆ ಈ ಹಿಂದೆ ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆದು ಮನವಿ ಸಲ್ಲಿಸಲಾಗಿತ್ತು. ಆದರೂ ಅರಣ್ಯಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಮತ್ತೆ ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯಿತು.

Advertisement

ಪ್ರತಿಭಟನೆಯಲ್ಲಿ ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಬಿಳಿ ಕಾಗದಗಳಿಗೆ ಸಹಿ ಮಾಡಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Advertisement

ಲೋಕೇಶ್ ಅವರಿಗೆ ಹಲ್ಲೆ ನಡೆಸಿದ ಅರಣ್ಯ ರಕ್ಷಕ  ಹಾಗೂ ಅವರಿಗೆ ಸಹಕರಿಸಿದ ಇತರ ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಮನವಿ ಮಾಡಲಾಗಿದೆ.ಇಲ್ಲದೇ ಹೋದಲ್ಲಿ ಮುಖ್ಯಮಂತ್ರಿ ನಿವಾಸ,ಗೃಹಸಚಿವರ ನಾಸ ಮುಂದೆ ಪ್ರತಿಭಟನೆ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

ಪೋಲಿಸ್ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ತಂಡದ ಸದಸ್ಯರು,ಮಾನವಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು,ಗೌಡ ಸಮುದಾಯದ ಸದಸ್ಯರು, ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಪೋಲಿಸರು ಭದ್ರತೆಯನ್ನು ಒದಗಿಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

7 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago