ಅಧಿಕಾರಿಗಳ ಗೈರು : ಪಂಜದಲ್ಲಿ ಗ್ರಾಮ ಸಭೆ ಮುಂದೂಡಿಕೆ

July 17, 2019
12:43 PM

ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.

Advertisement
Advertisement

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು  ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.

ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ  ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ  ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.

 

ಈ ವರದಿಯ ಲಿಂಕ್ ಇಲ್ಲಿದೆ…

Advertisement

https://theruralmirror.com/?p=6965

 

 

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!
May 31, 2025
6:33 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ
May 30, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group