ಅಧಿಕಾರಿಗಳ ಗೈರು : ಪಂಜದಲ್ಲಿ ಗ್ರಾಮ ಸಭೆ ಮುಂದೂಡಿಕೆ

July 17, 2019
12:43 PM

ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು  ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.

ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ  ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ  ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.

 

ಈ ವರದಿಯ ಲಿಂಕ್ ಇಲ್ಲಿದೆ…

https://theruralmirror.com/?p=6965

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror