ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.
ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.
ಈ ವರದಿಯ ಲಿಂಕ್ ಇಲ್ಲಿದೆ…
https://theruralmirror.com/?p=6965
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…