ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.
ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.
ಈ ವರದಿಯ ಲಿಂಕ್ ಇಲ್ಲಿದೆ…
https://theruralmirror.com/?p=6965
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…