ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.
ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.
ಈ ವರದಿಯ ಲಿಂಕ್ ಇಲ್ಲಿದೆ…
https://theruralmirror.com/?p=6965
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…