ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.
ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.
ಈ ವರದಿಯ ಲಿಂಕ್ ಇಲ್ಲಿದೆ…
https://theruralmirror.com/?p=6965
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…