Advertisement
ಸುದ್ದಿಗಳು

ಅಧಿಕಾರಿಗಳ ಗೈರು : ಪಂಜದಲ್ಲಿ ಗ್ರಾಮ ಸಭೆ ಮುಂದೂಡಿಕೆ

Share

ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು  ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.

ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ  ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ  ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.

 

ಈ ವರದಿಯ ಲಿಂಕ್ ಇಲ್ಲಿದೆ…

https://theruralmirror.com/?p=6965

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago