ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.
ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.
ಈ ವರದಿಯ ಲಿಂಕ್ ಇಲ್ಲಿದೆ…
https://theruralmirror.com/?p=6965
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…