ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.
ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.
ಈ ವರದಿಯ ಲಿಂಕ್ ಇಲ್ಲಿದೆ…
https://theruralmirror.com/?p=6965
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…