ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…