ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…