ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…