ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…