ಮಂಗಳೂರು : ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ.
ಗ್ರಾಮ ಪಂಚಾಯತ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು ಕ್ರಮ ಕೈಗೊಂಡಿದ್ದರೂ, ಕೆಲವೇ ಪಡಿತರ ಚೀಟಿದಾರರು ಮಾತ್ರ ಬಿಪಿಎಲ್ ಪಡಿತರ ಚೀಟಿಯನ್ನು ಕಚೇರಿಗೆ ಹಾಜರು ಪಡಿಸಿರುತ್ತಾರೆ. ಆದಾಗ್ಯೂ ಇನ್ನೂ ನಿಗದಿತ ಮಾನದಂಡಗಳ ಹೊರತಾಗಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಾಹನಗಳ ಮಾಲಿಕತ್ವದ ಬಗ್ಗೆ ಆರ್ಟಿಓ ಡಾಟಾ, ಖಾಸಗಿ/ಸರಕಾರಿ/ನಿಗಮ/ಮಂಡಳಿಗಳ ಸಿಬ್ಬಂದಿಗಳ ಮಾಹಿತಿಯನ್ನು ಪಡೆದು, ಪಡಿತರ ಚೀಟಿಯೊಂದಿಗೆ ಜೋಡಣೆಯಾಗಿರುವ ಆಧಾರ್ ಸಂಖ್ಯೆಯನ್ನು ತಾಳೆ ನೋಡುವುದು, ಕಟ್ಟಡ/ಭೂಮಿ ವಿಸ್ತೀರ್ಣದ ವಿವರದ ಬಗ್ಗೆ ಸಂಬಂಧ ಪಟ್ಟಕಚೇರಿಯಿಂದ ಮಾಹಿತಿ ಪಡೆದುಕೊಳ್ಳುವುದು ಇವೇ ಮುಂತಾದ ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಕಂಡು ಬಂದ ಅನರ್ಹ ಪಡಿತರ ಚೀಟಿದಾರರ ವಿರುದ್ಧದ ಕರ್ನಾಟಕ (ರೇಷನ್ ಕಾರ್ಡ್ ಅನಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟುವುದು) ಆದೇಶ 1977 ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಆದುದರಿಂದ ಯಾರು ಅನರ್ಹ ಪಡಿತರ ಚೀಟಿ ಹೊಂದಿರುತ್ತಾರೆಯೋ ಅಂತಹವರು ಕೂಡಲೇ ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ತಾಲೂಕು ಕಚೇರಿಗೆ ಹಾಜರುಪಡಿಸುವಂತೆ ತಹಶೀಲ್ದಾರರು, ಮಂಗಳೂರು ತಾಲೂಕು ಇವರ ಪ್ರಕಟಣೆ ತಿಳಿಸಿದೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…