ಮಂಗಳೂರು : ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ.
ಗ್ರಾಮ ಪಂಚಾಯತ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು ಕ್ರಮ ಕೈಗೊಂಡಿದ್ದರೂ, ಕೆಲವೇ ಪಡಿತರ ಚೀಟಿದಾರರು ಮಾತ್ರ ಬಿಪಿಎಲ್ ಪಡಿತರ ಚೀಟಿಯನ್ನು ಕಚೇರಿಗೆ ಹಾಜರು ಪಡಿಸಿರುತ್ತಾರೆ. ಆದಾಗ್ಯೂ ಇನ್ನೂ ನಿಗದಿತ ಮಾನದಂಡಗಳ ಹೊರತಾಗಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಾಹನಗಳ ಮಾಲಿಕತ್ವದ ಬಗ್ಗೆ ಆರ್ಟಿಓ ಡಾಟಾ, ಖಾಸಗಿ/ಸರಕಾರಿ/ನಿಗಮ/ಮಂಡಳಿಗಳ ಸಿಬ್ಬಂದಿಗಳ ಮಾಹಿತಿಯನ್ನು ಪಡೆದು, ಪಡಿತರ ಚೀಟಿಯೊಂದಿಗೆ ಜೋಡಣೆಯಾಗಿರುವ ಆಧಾರ್ ಸಂಖ್ಯೆಯನ್ನು ತಾಳೆ ನೋಡುವುದು, ಕಟ್ಟಡ/ಭೂಮಿ ವಿಸ್ತೀರ್ಣದ ವಿವರದ ಬಗ್ಗೆ ಸಂಬಂಧ ಪಟ್ಟಕಚೇರಿಯಿಂದ ಮಾಹಿತಿ ಪಡೆದುಕೊಳ್ಳುವುದು ಇವೇ ಮುಂತಾದ ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಕಂಡು ಬಂದ ಅನರ್ಹ ಪಡಿತರ ಚೀಟಿದಾರರ ವಿರುದ್ಧದ ಕರ್ನಾಟಕ (ರೇಷನ್ ಕಾರ್ಡ್ ಅನಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟುವುದು) ಆದೇಶ 1977 ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಆದುದರಿಂದ ಯಾರು ಅನರ್ಹ ಪಡಿತರ ಚೀಟಿ ಹೊಂದಿರುತ್ತಾರೆಯೋ ಅಂತಹವರು ಕೂಡಲೇ ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ತಾಲೂಕು ಕಚೇರಿಗೆ ಹಾಜರುಪಡಿಸುವಂತೆ ತಹಶೀಲ್ದಾರರು, ಮಂಗಳೂರು ತಾಲೂಕು ಇವರ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…