ಮಂಗಳೂರು : ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ.
ಗ್ರಾಮ ಪಂಚಾಯತ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು ಕ್ರಮ ಕೈಗೊಂಡಿದ್ದರೂ, ಕೆಲವೇ ಪಡಿತರ ಚೀಟಿದಾರರು ಮಾತ್ರ ಬಿಪಿಎಲ್ ಪಡಿತರ ಚೀಟಿಯನ್ನು ಕಚೇರಿಗೆ ಹಾಜರು ಪಡಿಸಿರುತ್ತಾರೆ. ಆದಾಗ್ಯೂ ಇನ್ನೂ ನಿಗದಿತ ಮಾನದಂಡಗಳ ಹೊರತಾಗಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಾಹನಗಳ ಮಾಲಿಕತ್ವದ ಬಗ್ಗೆ ಆರ್ಟಿಓ ಡಾಟಾ, ಖಾಸಗಿ/ಸರಕಾರಿ/ನಿಗಮ/ಮಂಡಳಿಗಳ ಸಿಬ್ಬಂದಿಗಳ ಮಾಹಿತಿಯನ್ನು ಪಡೆದು, ಪಡಿತರ ಚೀಟಿಯೊಂದಿಗೆ ಜೋಡಣೆಯಾಗಿರುವ ಆಧಾರ್ ಸಂಖ್ಯೆಯನ್ನು ತಾಳೆ ನೋಡುವುದು, ಕಟ್ಟಡ/ಭೂಮಿ ವಿಸ್ತೀರ್ಣದ ವಿವರದ ಬಗ್ಗೆ ಸಂಬಂಧ ಪಟ್ಟಕಚೇರಿಯಿಂದ ಮಾಹಿತಿ ಪಡೆದುಕೊಳ್ಳುವುದು ಇವೇ ಮುಂತಾದ ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಕಂಡು ಬಂದ ಅನರ್ಹ ಪಡಿತರ ಚೀಟಿದಾರರ ವಿರುದ್ಧದ ಕರ್ನಾಟಕ (ರೇಷನ್ ಕಾರ್ಡ್ ಅನಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಗಟ್ಟುವುದು) ಆದೇಶ 1977 ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಆದುದರಿಂದ ಯಾರು ಅನರ್ಹ ಪಡಿತರ ಚೀಟಿ ಹೊಂದಿರುತ್ತಾರೆಯೋ ಅಂತಹವರು ಕೂಡಲೇ ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ತಾಲೂಕು ಕಚೇರಿಗೆ ಹಾಜರುಪಡಿಸುವಂತೆ ತಹಶೀಲ್ದಾರರು, ಮಂಗಳೂರು ತಾಲೂಕು ಇವರ ಪ್ರಕಟಣೆ ತಿಳಿಸಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…