Advertisement
ಸುದ್ದಿಗಳು

ಅನಾರೋಗ್ಯ ಪೀಡಿತ ವೃದ್ಧರಿಗೆ ಚಿಕಿತ್ಸೆ ವ್ಯವಸ್ಥೆ

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ  ಕಾಲೇಜಿನ ಮುಂಭಾಗದ ಗ್ರಾ.ಪಂ.ನ ಬಸ್ ನಿಲ್ದಾಣದಲ್ಲಿ ಸುಮಾರು 70 ವರ್ಷದ ಕಾಸರಗೋಡಿನ ಮಣಿ ಎಂಬ ವೃದ್ಧರು ಕಳೆದ ಕೆಲವು ಸಮಯದಿಂದ ವಾಸ್ತವ್ಯ ಹೂಡಿದ್ದರು.

Advertisement
Advertisement

ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದರು.ಅಲ್ಲದೆ ಇವರ ಕಾಲು, ಕೈ ಇತ್ಯಾದಿ ಕಡೆಗಳಲ್ಲಿ ಗಾಯವಾಗಿ ಕೀವು ತುಂಬಿಕೊಂಡಿತ್ತು.ಇದನ್ನು  ಗಮನಿಸಿದ ಸುಬ್ರಹ್ಮಣ್ಯದ ಸಮಾಜ ಸೇವಕ ರವಿಕಕ್ಕೆಪದವು ಅನಾರೋಗ್ಯ ಪೀಡಿತರಾಗಿದ್ದ ವೃದ್ಧ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.ಈ ಉತ್ತಮ ಕಾರ್ಯಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್, ಗ್ರಾ.ಪಂ.ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈ  ಕಾರ್ಯವು ಇದೀಗ ಸರ್ವರ ಪ್ರಂಶಸೆಗೆ ಪಾತ್ರವಾಗಿದೆ.

ರವಿ ಕಕ್ಕೆಪದವು ಅವರ ನೇತೃತ್ವದಲ್ಲಿ 108 ಆಂಬ್ಯುಲೆನ್ಸ್ ನಲ್ಲಿ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ವೃದ್ಧರನ್ನು ಸಾಗಿಸಲಾಯಿತು.ಆರಂಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಪ್ರಥಮ ಚಿಕಿತ್ಸೆ ನೀಡಿದರು.ಬಳಿಕ ಅವರನ್ನು ಮಂಗಳೂರಿಗೆ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಪಿಡಿಓ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ.ಡಿ, ರೋಟರಿ ಅಧ್ಯಕ್ಷ ಭರತ್ ನೆಕ್ರಾಜೆ, ನಿರ್ದೇಶಕ ಗೋಪಾಲ್ ಎಣ್ಣೆಮಜಲು, ಜೇಸಿಸ್ ನಿರ್ದೇಶಕ ಮಣಿಕಂಠ ಉಪಸ್ಥಿತರಿದ್ದರು.ಈ ಹಿಂದೆ ಅನಾರೋಗ್ಯ ಪೀಡಿತ ಮಹಿಳೆಯೋರ್ವರನ್ನು ರವಿ ಕಕ್ಕೆಪದವು ಅವರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

4 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

4 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

14 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

14 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

14 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

15 hours ago