ಸುದ್ದಿಗಳು

ಅನಾರೋಗ್ಯ ಪೀಡಿತ ವೃದ್ಧರಿಗೆ ಚಿಕಿತ್ಸೆ ವ್ಯವಸ್ಥೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ  ಕಾಲೇಜಿನ ಮುಂಭಾಗದ ಗ್ರಾ.ಪಂ.ನ ಬಸ್ ನಿಲ್ದಾಣದಲ್ಲಿ ಸುಮಾರು 70 ವರ್ಷದ ಕಾಸರಗೋಡಿನ ಮಣಿ ಎಂಬ ವೃದ್ಧರು ಕಳೆದ ಕೆಲವು ಸಮಯದಿಂದ ವಾಸ್ತವ್ಯ ಹೂಡಿದ್ದರು.

Advertisement
Advertisement

ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದರು.ಅಲ್ಲದೆ ಇವರ ಕಾಲು, ಕೈ ಇತ್ಯಾದಿ ಕಡೆಗಳಲ್ಲಿ ಗಾಯವಾಗಿ ಕೀವು ತುಂಬಿಕೊಂಡಿತ್ತು.ಇದನ್ನು  ಗಮನಿಸಿದ ಸುಬ್ರಹ್ಮಣ್ಯದ ಸಮಾಜ ಸೇವಕ ರವಿಕಕ್ಕೆಪದವು ಅನಾರೋಗ್ಯ ಪೀಡಿತರಾಗಿದ್ದ ವೃದ್ಧ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.ಈ ಉತ್ತಮ ಕಾರ್ಯಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್, ಗ್ರಾ.ಪಂ.ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈ  ಕಾರ್ಯವು ಇದೀಗ ಸರ್ವರ ಪ್ರಂಶಸೆಗೆ ಪಾತ್ರವಾಗಿದೆ.

ರವಿ ಕಕ್ಕೆಪದವು ಅವರ ನೇತೃತ್ವದಲ್ಲಿ 108 ಆಂಬ್ಯುಲೆನ್ಸ್ ನಲ್ಲಿ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ವೃದ್ಧರನ್ನು ಸಾಗಿಸಲಾಯಿತು.ಆರಂಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಪ್ರಥಮ ಚಿಕಿತ್ಸೆ ನೀಡಿದರು.ಬಳಿಕ ಅವರನ್ನು ಮಂಗಳೂರಿಗೆ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಪಿಡಿಓ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ.ಡಿ, ರೋಟರಿ ಅಧ್ಯಕ್ಷ ಭರತ್ ನೆಕ್ರಾಜೆ, ನಿರ್ದೇಶಕ ಗೋಪಾಲ್ ಎಣ್ಣೆಮಜಲು, ಜೇಸಿಸ್ ನಿರ್ದೇಶಕ ಮಣಿಕಂಠ ಉಪಸ್ಥಿತರಿದ್ದರು.ಈ ಹಿಂದೆ ಅನಾರೋಗ್ಯ ಪೀಡಿತ ಮಹಿಳೆಯೋರ್ವರನ್ನು ರವಿ ಕಕ್ಕೆಪದವು ಅವರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

5 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

6 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

9 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

13 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

13 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

22 hours ago