Advertisement
ಸುದ್ದಿಗಳು

ಅನಾರೋಗ್ಯ ಪೀಡಿತ ವೃದ್ಧರಿಗೆ ಚಿಕಿತ್ಸೆ ವ್ಯವಸ್ಥೆ

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ  ಕಾಲೇಜಿನ ಮುಂಭಾಗದ ಗ್ರಾ.ಪಂ.ನ ಬಸ್ ನಿಲ್ದಾಣದಲ್ಲಿ ಸುಮಾರು 70 ವರ್ಷದ ಕಾಸರಗೋಡಿನ ಮಣಿ ಎಂಬ ವೃದ್ಧರು ಕಳೆದ ಕೆಲವು ಸಮಯದಿಂದ ವಾಸ್ತವ್ಯ ಹೂಡಿದ್ದರು.

Advertisement
Advertisement

ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದರು.ಅಲ್ಲದೆ ಇವರ ಕಾಲು, ಕೈ ಇತ್ಯಾದಿ ಕಡೆಗಳಲ್ಲಿ ಗಾಯವಾಗಿ ಕೀವು ತುಂಬಿಕೊಂಡಿತ್ತು.ಇದನ್ನು  ಗಮನಿಸಿದ ಸುಬ್ರಹ್ಮಣ್ಯದ ಸಮಾಜ ಸೇವಕ ರವಿಕಕ್ಕೆಪದವು ಅನಾರೋಗ್ಯ ಪೀಡಿತರಾಗಿದ್ದ ವೃದ್ಧ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.ಈ ಉತ್ತಮ ಕಾರ್ಯಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್, ಗ್ರಾ.ಪಂ.ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈ  ಕಾರ್ಯವು ಇದೀಗ ಸರ್ವರ ಪ್ರಂಶಸೆಗೆ ಪಾತ್ರವಾಗಿದೆ.

Advertisement

ರವಿ ಕಕ್ಕೆಪದವು ಅವರ ನೇತೃತ್ವದಲ್ಲಿ 108 ಆಂಬ್ಯುಲೆನ್ಸ್ ನಲ್ಲಿ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ವೃದ್ಧರನ್ನು ಸಾಗಿಸಲಾಯಿತು.ಆರಂಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಪ್ರಥಮ ಚಿಕಿತ್ಸೆ ನೀಡಿದರು.ಬಳಿಕ ಅವರನ್ನು ಮಂಗಳೂರಿಗೆ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಪಿಡಿಓ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ.ಡಿ, ರೋಟರಿ ಅಧ್ಯಕ್ಷ ಭರತ್ ನೆಕ್ರಾಜೆ, ನಿರ್ದೇಶಕ ಗೋಪಾಲ್ ಎಣ್ಣೆಮಜಲು, ಜೇಸಿಸ್ ನಿರ್ದೇಶಕ ಮಣಿಕಂಠ ಉಪಸ್ಥಿತರಿದ್ದರು.ಈ ಹಿಂದೆ ಅನಾರೋಗ್ಯ ಪೀಡಿತ ಮಹಿಳೆಯೋರ್ವರನ್ನು ರವಿ ಕಕ್ಕೆಪದವು ಅವರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

14 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

16 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago