Advertisement
ಸುದ್ದಿಗಳು

ಅನಾರೋಗ್ಯ ಪೀಡಿತ ವೃದ್ಧರಿಗೆ ಚಿಕಿತ್ಸೆ ವ್ಯವಸ್ಥೆ

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ  ಕಾಲೇಜಿನ ಮುಂಭಾಗದ ಗ್ರಾ.ಪಂ.ನ ಬಸ್ ನಿಲ್ದಾಣದಲ್ಲಿ ಸುಮಾರು 70 ವರ್ಷದ ಕಾಸರಗೋಡಿನ ಮಣಿ ಎಂಬ ವೃದ್ಧರು ಕಳೆದ ಕೆಲವು ಸಮಯದಿಂದ ವಾಸ್ತವ್ಯ ಹೂಡಿದ್ದರು.

ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದರು.ಅಲ್ಲದೆ ಇವರ ಕಾಲು, ಕೈ ಇತ್ಯಾದಿ ಕಡೆಗಳಲ್ಲಿ ಗಾಯವಾಗಿ ಕೀವು ತುಂಬಿಕೊಂಡಿತ್ತು.ಇದನ್ನು  ಗಮನಿಸಿದ ಸುಬ್ರಹ್ಮಣ್ಯದ ಸಮಾಜ ಸೇವಕ ರವಿಕಕ್ಕೆಪದವು ಅನಾರೋಗ್ಯ ಪೀಡಿತರಾಗಿದ್ದ ವೃದ್ಧ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.ಈ ಉತ್ತಮ ಕಾರ್ಯಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್, ಗ್ರಾ.ಪಂ.ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈ  ಕಾರ್ಯವು ಇದೀಗ ಸರ್ವರ ಪ್ರಂಶಸೆಗೆ ಪಾತ್ರವಾಗಿದೆ.

ರವಿ ಕಕ್ಕೆಪದವು ಅವರ ನೇತೃತ್ವದಲ್ಲಿ 108 ಆಂಬ್ಯುಲೆನ್ಸ್ ನಲ್ಲಿ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ವೃದ್ಧರನ್ನು ಸಾಗಿಸಲಾಯಿತು.ಆರಂಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಪ್ರಥಮ ಚಿಕಿತ್ಸೆ ನೀಡಿದರು.ಬಳಿಕ ಅವರನ್ನು ಮಂಗಳೂರಿಗೆ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಪಿಡಿಓ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ.ಡಿ, ರೋಟರಿ ಅಧ್ಯಕ್ಷ ಭರತ್ ನೆಕ್ರಾಜೆ, ನಿರ್ದೇಶಕ ಗೋಪಾಲ್ ಎಣ್ಣೆಮಜಲು, ಜೇಸಿಸ್ ನಿರ್ದೇಶಕ ಮಣಿಕಂಠ ಉಪಸ್ಥಿತರಿದ್ದರು.ಈ ಹಿಂದೆ ಅನಾರೋಗ್ಯ ಪೀಡಿತ ಮಹಿಳೆಯೋರ್ವರನ್ನು ರವಿ ಕಕ್ಕೆಪದವು ಅವರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago