Advertisement
ಸುದ್ದಿಗಳು

ಅನಾರೋಗ್ಯ ಪೀಡಿತ ವೃದ್ಧರಿಗೆ ಚಿಕಿತ್ಸೆ ವ್ಯವಸ್ಥೆ

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ  ಕಾಲೇಜಿನ ಮುಂಭಾಗದ ಗ್ರಾ.ಪಂ.ನ ಬಸ್ ನಿಲ್ದಾಣದಲ್ಲಿ ಸುಮಾರು 70 ವರ್ಷದ ಕಾಸರಗೋಡಿನ ಮಣಿ ಎಂಬ ವೃದ್ಧರು ಕಳೆದ ಕೆಲವು ಸಮಯದಿಂದ ವಾಸ್ತವ್ಯ ಹೂಡಿದ್ದರು.

ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ಈಡಾಗಿದ್ದರು.ಅಲ್ಲದೆ ಇವರ ಕಾಲು, ಕೈ ಇತ್ಯಾದಿ ಕಡೆಗಳಲ್ಲಿ ಗಾಯವಾಗಿ ಕೀವು ತುಂಬಿಕೊಂಡಿತ್ತು.ಇದನ್ನು  ಗಮನಿಸಿದ ಸುಬ್ರಹ್ಮಣ್ಯದ ಸಮಾಜ ಸೇವಕ ರವಿಕಕ್ಕೆಪದವು ಅನಾರೋಗ್ಯ ಪೀಡಿತರಾಗಿದ್ದ ವೃದ್ಧ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.ಈ ಉತ್ತಮ ಕಾರ್ಯಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್, ಗ್ರಾ.ಪಂ.ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈ  ಕಾರ್ಯವು ಇದೀಗ ಸರ್ವರ ಪ್ರಂಶಸೆಗೆ ಪಾತ್ರವಾಗಿದೆ.

ರವಿ ಕಕ್ಕೆಪದವು ಅವರ ನೇತೃತ್ವದಲ್ಲಿ 108 ಆಂಬ್ಯುಲೆನ್ಸ್ ನಲ್ಲಿ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ವೃದ್ಧರನ್ನು ಸಾಗಿಸಲಾಯಿತು.ಆರಂಭದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಪ್ರಥಮ ಚಿಕಿತ್ಸೆ ನೀಡಿದರು.ಬಳಿಕ ಅವರನ್ನು ಮಂಗಳೂರಿಗೆ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಪಿಡಿಓ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ.ಡಿ, ರೋಟರಿ ಅಧ್ಯಕ್ಷ ಭರತ್ ನೆಕ್ರಾಜೆ, ನಿರ್ದೇಶಕ ಗೋಪಾಲ್ ಎಣ್ಣೆಮಜಲು, ಜೇಸಿಸ್ ನಿರ್ದೇಶಕ ಮಣಿಕಂಠ ಉಪಸ್ಥಿತರಿದ್ದರು.ಈ ಹಿಂದೆ ಅನಾರೋಗ್ಯ ಪೀಡಿತ ಮಹಿಳೆಯೋರ್ವರನ್ನು ರವಿ ಕಕ್ಕೆಪದವು ಅವರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago