Advertisement
ಸುದ್ದಿಗಳು

ಅನ್ನ ಎಸೆಯಬೇಡಿ-ಇದರ ಬೆಲೆ ತಿಳಿಯಿರಿ | ಅನ್ನದಾನದ ಕ್ಷೇತ್ರದಲ್ಲಿ ನಡೆದ ನೋವಿನ ಕತೆ ಏನಿದು ? | ತಕ್ಷಣ ಎಚ್ಚೆತ್ತ ಅಧಿಕಾರಿಗಳು, ಗ್ರಾಮಸ್ಥರು |

Share

ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್. ಸರಕಾರ ಬಡ ಜನರು ಹಸಿವಿನಿಂದ ಬಳಲಬಾರದು ಎಂದು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ವಿವಿಧ ಸಂಘ ಸಂಸ್ಥೆಗಳು ನಿರಂತರ ಶ್ರಮ ವಹಿಸುತ್ತಿವೆ, ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಎಲ್ಲರದೂ ಒಂದೇ ಕೆಲಸ ಬಡವರು ಹಸಿವಿನಿಂದ ಬಳಲಬಾರದು. ಅನೇಕರು ತಾವು ಹಸಿವಿನಿಂದ ಇದ್ದರೂ ಸೇವೆಯಲ್ಲೇ ತೊಡಗಿದ್ದಾರೆ. ಆದರೆ ಇದೊಂದು ಘಟನೆ ತೀರಾ ವಿಷಾದನೀಯ. ಏನಿದು ?

 

ಬಡವರು, ನಿರಾಶ್ರಿತ ಜನರು ಹಸಿವಿನಿಂದ ಬಳಲಬಾರದು ಎಂದು  ಸರಕಾರ ವ್ಯವಸ್ಥೆ ಮಾಡಿದೆ. ಇದರ ಭಾಗವಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಅಭಯ ವಸತಿಗೃಹದಲ್ಲಿ ಹೊರರಾಜ್ಯದಿಂದ ವಲಸೆ ಬಂದ ಕಾಮಿ೯ಕ ನಿರಾಶ್ರಿತರಿಗೆ ವಸತಿ ವ್ಯವಸ್ಥೆ ಹಾಗೂ  ದೇವಸ್ಥಾನದ ವತಿಯಿಂದ ಉಚಿತ ಭೋಜನ ವ್ಯವಸ್ಥೆ ಮಾಡಿದೆ. ದೇವಸ್ಥಾನದಲ್ಲಿ  ಪ್ರತಿನಿತ್ಯವೂ ಬೆಳ್ತಿಗೆ ಅಕ್ಕಿಯಿಂದ ಮಾಡಿದ ಊಟವನ್ನೇ ಪ್ರಸಾದದ ರೂಪದಲ್ಲಿ  ನೀಡಲಾಗುತ್ತದೆ. ಈ ಬಾರಿಯೂ ಅದೇ ನೀಡಲಾಗಿತ್ತು. ಅಧಿಕಾರಿಗಳು, ಸ್ಥಳೀಯ ಕಾರ್ಯಕರ್ತರು ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದರು. ಆದರೆ ಸೋಮವಾರ ಬೆಳಗ್ಗೆ ಅನ್ನವನ್ನು ಚೆಲ್ಲುವ ದೃಶ್ಯ ಕಂಡುಬಂತು. ಇದಕ್ಕೆ ವ್ಯಾಪಕವಾದ ಅಸಮಾಧಾನ ಕೇಳಿ ಬಂದಿದೆ. ಅನ್ನ ಚೆಲ್ಲಿರುವುದು  ತಿಳಿದಂತೆಯೇ ದೇವಸ್ಥಾನದ ಆಡಳಿತ ಹಾಗೂ ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಈ ಬಗ್ಗೆ ಜಾಗೃತರಾಗಿ  ಏಕೆ ಎಸೆದಿದ್ದಾರೆ ಎಂದು  ಗಮನಿಸಿದ್ದಾರೆ. ಇಂದಿನಿಂದಲೇ ಅನ್ನದ ಬದಲು ಚಪಾತಿ ಅಥವಾ ಪರ್ಯಾಯ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ಆದರೆ ಅನ್ನವನ್ನು  ಈ ಮಾದರಿಯಲ್ಲಿ  ಚೆಲ್ಲುವುದು  ಯಾವತ್ತೂ ಸರಿಯಲ್ಲ. ಅನ್ನದ ಮಹತ್ವವನ್ನು  ಎಲ್ಲರಿಗೂ ತಿಳಿಸಲೇಬೇಕಾದ ಅಗತ್ಯವಿದೆ. ದೇಶದಲ್ಲಿ  ಅನ್ನಕ್ಕಾಗಿ ಪರದಾಟ ಮಾಡುವ ಮಂದಿ  ಇದ್ದಾರೆ. ಎಲ್ಲೇ ಆಗಲಿ ರೈತ ಶ್ರಮಪಟ್ಟು ಬೆಳೆದ ಭತ್ತವನ್ನು ಅಕ್ಕಿಯ ರೂಪದಲ್ಲಿ ಸಿಗುವವರೆಗೆ ಅನೇಕರ ಶ್ರಮ ಇದೆ. ಈ ಎಲ್ಲಾ ಬೆವರಹನಿಗಳು ಸೇರಿ ಶ್ರದ್ಧಾ ಕೇಂದ್ರಗಳಲ್ಲಿ  ಪ್ರಸಾದದ ರೂಪದಲ್ಲಿ  ಸಿಕ್ಕಿದರೆ ಮನೆಗಳಲ್ಲಿ ಅನ್ನವಾಗಿ ಸಿಗುತ್ತದೆ. ಹೀಗಾಗಿ ಹೀಗೆ ಎಸೆಯುವ ಮಂದಿಗೆ ಜಾಗೃತಿ ಮೂಡಿಸಬೇಕಿದೆ. ಅನ್ನದ ಶ್ರೇಷ್ಟತೆ ತಿಳಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

28 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

35 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago