Advertisement
ಸುದ್ದಿಗಳು

ಅನ್ನ ಎಸೆಯಬೇಡಿ-ಇದರ ಬೆಲೆ ತಿಳಿಯಿರಿ | ಅನ್ನದಾನದ ಕ್ಷೇತ್ರದಲ್ಲಿ ನಡೆದ ನೋವಿನ ಕತೆ ಏನಿದು ? | ತಕ್ಷಣ ಎಚ್ಚೆತ್ತ ಅಧಿಕಾರಿಗಳು, ಗ್ರಾಮಸ್ಥರು |

Share

ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್. ಸರಕಾರ ಬಡ ಜನರು ಹಸಿವಿನಿಂದ ಬಳಲಬಾರದು ಎಂದು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ವಿವಿಧ ಸಂಘ ಸಂಸ್ಥೆಗಳು ನಿರಂತರ ಶ್ರಮ ವಹಿಸುತ್ತಿವೆ, ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಎಲ್ಲರದೂ ಒಂದೇ ಕೆಲಸ ಬಡವರು ಹಸಿವಿನಿಂದ ಬಳಲಬಾರದು. ಅನೇಕರು ತಾವು ಹಸಿವಿನಿಂದ ಇದ್ದರೂ ಸೇವೆಯಲ್ಲೇ ತೊಡಗಿದ್ದಾರೆ. ಆದರೆ ಇದೊಂದು ಘಟನೆ ತೀರಾ ವಿಷಾದನೀಯ. ಏನಿದು ?

 

ಬಡವರು, ನಿರಾಶ್ರಿತ ಜನರು ಹಸಿವಿನಿಂದ ಬಳಲಬಾರದು ಎಂದು  ಸರಕಾರ ವ್ಯವಸ್ಥೆ ಮಾಡಿದೆ. ಇದರ ಭಾಗವಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಅಭಯ ವಸತಿಗೃಹದಲ್ಲಿ ಹೊರರಾಜ್ಯದಿಂದ ವಲಸೆ ಬಂದ ಕಾಮಿ೯ಕ ನಿರಾಶ್ರಿತರಿಗೆ ವಸತಿ ವ್ಯವಸ್ಥೆ ಹಾಗೂ  ದೇವಸ್ಥಾನದ ವತಿಯಿಂದ ಉಚಿತ ಭೋಜನ ವ್ಯವಸ್ಥೆ ಮಾಡಿದೆ. ದೇವಸ್ಥಾನದಲ್ಲಿ  ಪ್ರತಿನಿತ್ಯವೂ ಬೆಳ್ತಿಗೆ ಅಕ್ಕಿಯಿಂದ ಮಾಡಿದ ಊಟವನ್ನೇ ಪ್ರಸಾದದ ರೂಪದಲ್ಲಿ  ನೀಡಲಾಗುತ್ತದೆ. ಈ ಬಾರಿಯೂ ಅದೇ ನೀಡಲಾಗಿತ್ತು. ಅಧಿಕಾರಿಗಳು, ಸ್ಥಳೀಯ ಕಾರ್ಯಕರ್ತರು ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದರು. ಆದರೆ ಸೋಮವಾರ ಬೆಳಗ್ಗೆ ಅನ್ನವನ್ನು ಚೆಲ್ಲುವ ದೃಶ್ಯ ಕಂಡುಬಂತು. ಇದಕ್ಕೆ ವ್ಯಾಪಕವಾದ ಅಸಮಾಧಾನ ಕೇಳಿ ಬಂದಿದೆ. ಅನ್ನ ಚೆಲ್ಲಿರುವುದು  ತಿಳಿದಂತೆಯೇ ದೇವಸ್ಥಾನದ ಆಡಳಿತ ಹಾಗೂ ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಈ ಬಗ್ಗೆ ಜಾಗೃತರಾಗಿ  ಏಕೆ ಎಸೆದಿದ್ದಾರೆ ಎಂದು  ಗಮನಿಸಿದ್ದಾರೆ. ಇಂದಿನಿಂದಲೇ ಅನ್ನದ ಬದಲು ಚಪಾತಿ ಅಥವಾ ಪರ್ಯಾಯ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ಆದರೆ ಅನ್ನವನ್ನು  ಈ ಮಾದರಿಯಲ್ಲಿ  ಚೆಲ್ಲುವುದು  ಯಾವತ್ತೂ ಸರಿಯಲ್ಲ. ಅನ್ನದ ಮಹತ್ವವನ್ನು  ಎಲ್ಲರಿಗೂ ತಿಳಿಸಲೇಬೇಕಾದ ಅಗತ್ಯವಿದೆ. ದೇಶದಲ್ಲಿ  ಅನ್ನಕ್ಕಾಗಿ ಪರದಾಟ ಮಾಡುವ ಮಂದಿ  ಇದ್ದಾರೆ. ಎಲ್ಲೇ ಆಗಲಿ ರೈತ ಶ್ರಮಪಟ್ಟು ಬೆಳೆದ ಭತ್ತವನ್ನು ಅಕ್ಕಿಯ ರೂಪದಲ್ಲಿ ಸಿಗುವವರೆಗೆ ಅನೇಕರ ಶ್ರಮ ಇದೆ. ಈ ಎಲ್ಲಾ ಬೆವರಹನಿಗಳು ಸೇರಿ ಶ್ರದ್ಧಾ ಕೇಂದ್ರಗಳಲ್ಲಿ  ಪ್ರಸಾದದ ರೂಪದಲ್ಲಿ  ಸಿಕ್ಕಿದರೆ ಮನೆಗಳಲ್ಲಿ ಅನ್ನವಾಗಿ ಸಿಗುತ್ತದೆ. ಹೀಗಾಗಿ ಹೀಗೆ ಎಸೆಯುವ ಮಂದಿಗೆ ಜಾಗೃತಿ ಮೂಡಿಸಬೇಕಿದೆ. ಅನ್ನದ ಶ್ರೇಷ್ಟತೆ ತಿಳಿಸಬೇಕಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

4 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

12 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

12 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

13 hours ago