Advertisement
ಕಾರ್ಯಕ್ರಮಗಳು

ಅನ್ವೇಷಣಾ-2019 ಅಗ್ರಿ ಟಿಂಕರಿಂಗ್ ಫೆಸ್ಟ್ ಸಮಾರೋಪ- ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಿದೆ: ಸತೀಶ್ಚಂದ್ರ

Share

ಪುತ್ತೂರು: ಮಕ್ಕಳಲ್ಲಿನ ಅದ್ಭುತ ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಿದೆ. ಇದರಿಂದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂರಂತಹ ವಿಜ್ಞಾನಿಗಳನ್ನು ವಿದ್ಯಾರ್ಥಿಗಳಲ್ಲಿ ಸೃಷ್ಟಿಸುವ ವೈಶಿಷ್ಟಪೂರ್ಣ ಕಾರ್ಯಕ್ರಮ ಇದಾಗಿದೆ. ಜೊತೆಗೆ ಅನ್ವೇಷಣಾ ಮನೋಭಾವವನ್ನು ಮಕ್ಕಳಿಂದ ಹಿಡಿದು ಹಿರಿಯವರ ತನಕ ಬೆಳೆಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಅನ್ವೇಷಣಾ-2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನ ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ರವಿವಾರ ಮಾತನಾಡಿದರು. ಕೃಷಿಯಲ್ಲಿ ನೂತನ ಅನ್ವೇಷಣೆಗಳಿಗೆ ವೇದಿಕೆಯನ್ನು ಒದಗಿಸಿ ಚಾಲನೆ ನೀಡಿದ ಹೆಗ್ಗಳಿಕೆ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಲ್ಲುತ್ತದೆ ಎಂದು ತಿಳಿಸಿದರು.

ದಕ್ಷಿಣಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿರಾಜ್ ಹೆಗ್ಡೆ ಮಾತನಾಡಿ, ಅನ್ವೇಷಣಾದಲ್ಲಿ ನವ ನವೀನ ಮಾದರಿಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗುವಂತೆ ಮಾಡಿದೆ ಎಂದರಲ್ಲದೆ, ಮಂಗಳೂರಿನ ರಿಸರ್ಚ್ ಮತ್ತು ಡೆವಲಪ್ಮೆಂಟ್ ಫಂಡ್‍ಗಳ ಬಳಕೆ ಮತ್ತು ಪ್ರೋತ್ಸಾಹಕ್ಕಾಗಿ ಬಳಸುವ ಯೋಜನೆ ಬಗ್ಗೆ ತಿಳಿಸಿದರು. ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಉಪಾಧ್ಯಕ್ಷ ಬಿ.ಎಸ್. ಶ್ರೀನಿವಾಸನ್ ಮಾತನಾಡಿ, ಅನ್ವೇಷಣ ಆಯೋಜನೆಗೆ ಧನ್ಯವಾದ ತಿಳಿಸಿದರು. ಲಘು ಉದ್ಯೋಗ ಭಾರತಿಯಿಂದ ಪೇಟೆಂಟ್ ನೀಡುವ ಭರವಸೆಯನ್ನು ನೀಡಿದರು. ಅನ್ವೇಷಣೆಯನ್ನು ದ್ವಿಗುಣಗೊಳಿಸಿ ಕೃಷಿಯು ಶೀಘ್ರದಲ್ಲೇ ಬೆಳೆಯುವಂತೆ ಸಹಾಯಕವಾಗಲಿ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಮಾತನಾಡಿ, ಕೃಷಿಯ ಕಡೆಗೆ ವಿದ್ಯಾರ್ಥಿಗಳ ದೃಷ್ಟಿ ಸಾಗಲಿ. ಕೃಷಿಯ ಮಾದರಿಗಳು ಶೀಘ್ರವೇ ಮಾರುಕಟ್ಟೆಗೆ ಬರಲಿವೆ ಎಂಬ ಅಭಿಲಾಷೆಯೊಂದಿಗೆ ಇದು ರೈತರ ಬಾಳಿಗೆ ಬೆಳಕಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾಲ್ಕು ವಿಭಾಗದ ವಿಜೇತರಿಗೆ ಬಹುಮಾನ ವಿತರಣೆಯೂ ನಡೆಯಿತು ಹಾಗೂ ಹೊಸ ಆವಿಷ್ಕಾರಗಳ ದತ್ತು ಸ್ವೀಕಾರ ಕಾರ್ಯವೂ ನಡೆಯಿತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‍ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಎರಡು ದಿನ ನಡೆದ ಅನ್ವೇಷಣಾ-2019ರ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ಉದ್ಯೋಗ ಹುಡುಕುವುದನ್ನು ಬಿಟ್ಟು ಉದ್ಯೋಗ ಸೃಷ್ಟಿಯನ್ನು ಮಾಡಬೇಕೆಂಬ ಆಶಯವೇ ಅನ್ವೇಷಣಾ-2019ಎಂದು ಹೇಳಿದರು.

ಶಾಲಾ ಆಡಳಿತ ಮಂಡಳಿ ಸದಸ್ಯರಾದ ವಸಂತಿ ಕೆದಿಲ ಅವರು ಸ್ವಾಗತಿಸಿದರು. ಶಿಕ್ಷಕಿಯರಾದ ಸುಗಿತಾ ರೈ, ಶಾಂತಿ ಹಾಗೂ ದೀಪ್ತಿ ಭಟ್ ವಿಜೇತರ ಪಟ್ಟಿಯನ್ನು ವಾಚಿಸಿದರು. ದತ್ತು ಸ್ವೀಕಾರದ ಪಟ್ಟಿಯನ್ನು ಭರತ್ ಪೈ ಅವರು ನೀಡಿದರು. ಕಾರ್ಯಕ್ರಮವನ್ನು ಸೌಮ್ಯ ಹಾಗೂ ಯಶೋಧ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

9 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

12 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

15 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago