ಸುಳ್ಯ: ವಿದ್ಯಾರ್ಥಿಗಳು ತಮ್ಮ ಬಾಲ್ಯದಲ್ಲಿಯೇ ತಮ್ಮ ನೈಜ ಪ್ರತಿಭೆಗಳನ್ನು ಅನಾವರಣಗೊಳಿಸಿದರೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ ಎಂದು ದ.ಕ. ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಕೆ.ಎಂ. ಮುಸ್ತಫ ಹೇಳಿದರು.
ಸುಳ್ಯ ಅನ್ಸಾರಿಯಾ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ, ದಅವಾ ಕಾಲೇಜು, ಗ್ರೀನ್ವ್ಯೂ ಅರೇಬಿಕ್ ಸ್ಕೂಲ್ ಹಾಗೂ ಅನ್ಸಾರಿಯಾ ಮದರಸ ಇದರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ `ಇಂಟರ್ ಮಿಲಾದ್ ಫೆಸ್ಟ್’ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಅನ್ಸಾರಿಯಾದ ಅಧ್ಯಕ್ಷ ಹಾಜಿ. ಕೆ. ಎಂ. ಅಬ್ದುಲ್ ಮಜೀದ್ ಜನತ ವಹಿಸಿದ್ದರು. ಖತೀಬರಾದ ಉಮ್ಮರ್ ಮುಸ್ಲಿಯಾರ್ ಮರ್ದಾಳರವರು ದ್ವಿದಿನ ಫೆಸ್ಟ್ ಆದ `ಎನ್ಲೈಟಿಂಗ್ ದ ಎನರ್ಜಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಹಾಜಿ ಅಬ್ದುಲ್ ಶುಕೂರ್, ಗಾಂಧಿನಗರ ಜುಮ್ಮಾ ಮಸೀದಿ ಉಪಾಧ್ಯಕ್ಷ ಹಮೀದ್ ಜನತಾ, ದ.ಕ. ಜಿಲ್ಲಾ ಮದರಸ ಅಧ್ಯಾಪಕರುಗಳ ಸಂಘದ ಅಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರು, ಎಂ.ಜೆ.ಎಂ. ಸಹಾಯಕ ಖತೀಬರಾದ ಶೌಕತ್ ಅಲಿ ಅಮಾನಿ ವಯನಾಡ್, ಝೈನುಲ್ ಆಬಿದೀನ್ ತಂಙಳ್ ಜಯನಗರ, ಸಮಿತಿ ಸದಸ್ಯರಾದ ಹಾಜಿ ಅಬ್ದುಲ್ ಗಫಾರ್, ಗಲ್ಫ್ ಪ್ರತಿನಿಧಿಗಳಾದ ಸಾಹು ಜಿದ್ದಾ, ಎಸ್.ಎಂ. ಅಬ್ದುರ್ರಹ್ಮಾನ್ ಭಾಗವಹಿಸಿದರು.
ಅನ್ಸಾರಿಯಾ ಮುದರ್ರಿಸರಾದ ಅಬೂಬಕ್ಕರ್ ಹಿಮಮಿ ಸಖಾಫಿ, ಮುಖ್ಯ ಗುರುಗಳಾದ ಝುಬೈರ್ ಹಿಮಾಮಿ, ಅಧ್ಯಾಪಕರುಗಳಾದ ನೌಶಾದ್ ಮದನಿ, ಯಾಕೂಬ್ ಮುಸ್ಲಿಯಾರ್ ಮೊದಲಾದವರು ಉಪಸ್ಥಿತರಿದ್ದರು. ವ್ಯವಸ್ಥಾಪಕ ಓವೈಸಿ ಬೀಟಿಗೆ ಸ್ವಾಗತಿಸಿ, ಸಿದ್ಧೀಕ್ ಮಾಸ್ಟರ್ ವಂದಿಸಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…