Advertisement
ಸುದ್ದಿಗಳು

ಅನ್ಸಾರಿಯಾ ಯುಎಇ – ಮೌಲೂದ್ ಪಾರಾಯಣ ಹಾಗೂ ಅಬ್ಬಾಸ್ ಹಾಜಿ ಅನುಸ್ಮರಣೆ

Share

ದುಬೈ: ನ.1 ಅನ್ಸಾರಿಯ ಯತೀಮ್ ಖಾನ ಮತ್ತು ನಿರ್ಗತಿಕರ ಕೇಂದ್ರ ಸುಳ್ಯ ಇದರ ಯು ಎ ಇ ಸಮಿತಿ ವತಿಯಿಂದ ಮೀಲಾದ್ ಸಮಾವೇಶ ಹಾಗು ಇತ್ತೀಚಿಗೆ ನಿಧನರಾದ ಮರ್ಹೂಂ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ರವರ ಅನುಸ್ಮರಣಾ ಕಾರ್ಯಕ್ರಮವು ಶುಕ್ರವಾರ ಅಸರ್ ನಮಾಝ್ ಬಳಿಕ ದುಬೈನ ನೈಫ್ ನಲ್ಲಿರುವ ಮದರಸಾ ಸಭಾಂಗಣದಲ್ಲಿ ನಡೆಯಿತು.

ಪ್ರವಾದಿ ಮುಹಮ್ಮದ್ ಮುಸ್ತಫಾ [ಸ.ಅ] ರವರವರನ್ನು ಸ್ತುತಿಸುವ ಮೌಲೂದ್ ಪಾರಾಯಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ದುಬೈನಲ್ಲಿ ಕೆಸಿಎಫ್ ಸಂಘಟನೆಯ ಕನ್ವೀನರ್ ಆಗಿರುವ ಕಬೀರ್ ಜಟ್ಟಿಪ್ಪಳ್ಳ ಮೌಲೂದ್’ ಹಾಗೂ ದುವಾಗೆ ನೇತೃತ್ವ ನೀಡಿದರು.

ಬಳಿಕ ಇತ್ತೀಚೆಗೆ ನಿಧನರಾದ ಸುಳ್ಯದ ಹಿರಿಯ ಸಾಮಾಜಿಕ ಮುಂದಾಳು ಹಾಗೂ ಹಿರಿಯ ಉದ್ಯಮಿಯಾಗಿದ್ದ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ಸ್ ಅವರಿಗೆ ತಹಲೀಲ್ ಸಮರ್ಪಿಸಲಾಯಿತು.
ಅನ್ಸಾರಿಯಾ ಯುಎಇ ಸಮಿತಿಯ ಅಧ್ಯಕ್ಷರಾದ ಝೈನುದ್ದೀನ್ ಬೆಳ್ಳಾರೆಯವರು ಮಾತನಾಡಿ, ಅಬ್ಬಾಸ್ ಹಾಜಿ ಅವರ ನಿಧನವು ಸುಳ್ಯದ ಜನತೆಗೆ ತುಂಬಲಾರದ ನಷ್ಟ. ಸುಳ್ಯ ದಲ್ಲಿ ಸರ್ವಧರ್ಮದವರು ಸಹಬಾಳ್ವೆಯಿಂದ ಜೀವನ ನಡೆಸಲು ಅಬ್ಬಾಸ್ ಹಾಜಿಯವರ ಮುಂದಾಳತ್ವ ಪ್ರಮುಖ ಪಾತ್ರ ವಹಿಸಿತ್ತು ಎಂದು ಹೇಳಿದರು.

ಸುಳ್ಯದ ಅನ್ಸಾರಿಯಾದ ವಠಾರದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್ ಕಟ್ಟಡದ ಕಾಮಗಾರಿ ಸಾಧ್ಯವಾದಷ್ಟು ವೇಗದಲ್ಲಿ ಪೂರ್ತಿಗೊಳಿಸಲು ಸರ್ವರ ಸಹಕಾರ ಕೋರಿದರು.
ನಾಸಿರ್ ಜಟ್ಟಿಪ್ಪಳ್ಳ ಸ್ವಾಗತಿಸಿ, ಮುಖ್ತಾರ್ ಅರಂತೋಡು ವಂದನಾರ್ಪಣೆ ಮಾಡಿದರು. ಸಮಿತಿಯ ಪ್ರಮುಖರಾದ ಮುಹಮ್ಮದ್ ಇಂಜಿನಿಯರ್ ಮೇನಾಲ, ಖಜಾಂಚಿ ಮುನೀರ್ ಜಟ್ಟಿಪ್ಪಳ್ಳ, ಗೌರವಾಧ್ಯಕ್ಷರಾದ ಹಮೀದ್ ಕೆಯು, ಹಮೀದ್ ಪೆರಾಜೆ ಕಬಾಯಿಲ್, ಅಜ್ಮಾನ್ ಯುನಿಟ್ ಅಧ್ಯಕ್ಷರಾದ ಅಝೀಝ್ ಕುಂಬಕ್ಕೋಡು, ಅಬುಧಾಬಿ ಯುನಿಟ್ ಅಧ್ಯಕ್ಷರಾದ ಲತೀಫ್ ನ್ಯಾಷನಲ್, ಅಜ್ಮಾನ್ ಜಿಎಂಸಿ ಗ್ರೂಪ್, ಮೊಯ್ದೀನ್ ಕಬಾಯಿಲ್, ರಫೀಕ್ ಜಟ್ಟಿಪ್ಪಳ್ಳ ಸೇರಿ ಸುಳ್ಯ ತಾಲೂಕಿನ ಹಲವಾರು ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಖ್ ವಿತರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

14 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

17 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

18 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

19 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago