Advertisement
ಸುದ್ದಿಗಳು

ಅನ್ಸಾರಿಯಾ ಯುಎಇ – ಮೌಲೂದ್ ಪಾರಾಯಣ ಹಾಗೂ ಅಬ್ಬಾಸ್ ಹಾಜಿ ಅನುಸ್ಮರಣೆ

Share

ದುಬೈ: ನ.1 ಅನ್ಸಾರಿಯ ಯತೀಮ್ ಖಾನ ಮತ್ತು ನಿರ್ಗತಿಕರ ಕೇಂದ್ರ ಸುಳ್ಯ ಇದರ ಯು ಎ ಇ ಸಮಿತಿ ವತಿಯಿಂದ ಮೀಲಾದ್ ಸಮಾವೇಶ ಹಾಗು ಇತ್ತೀಚಿಗೆ ನಿಧನರಾದ ಮರ್ಹೂಂ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ರವರ ಅನುಸ್ಮರಣಾ ಕಾರ್ಯಕ್ರಮವು ಶುಕ್ರವಾರ ಅಸರ್ ನಮಾಝ್ ಬಳಿಕ ದುಬೈನ ನೈಫ್ ನಲ್ಲಿರುವ ಮದರಸಾ ಸಭಾಂಗಣದಲ್ಲಿ ನಡೆಯಿತು.

ಪ್ರವಾದಿ ಮುಹಮ್ಮದ್ ಮುಸ್ತಫಾ [ಸ.ಅ] ರವರವರನ್ನು ಸ್ತುತಿಸುವ ಮೌಲೂದ್ ಪಾರಾಯಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ದುಬೈನಲ್ಲಿ ಕೆಸಿಎಫ್ ಸಂಘಟನೆಯ ಕನ್ವೀನರ್ ಆಗಿರುವ ಕಬೀರ್ ಜಟ್ಟಿಪ್ಪಳ್ಳ ಮೌಲೂದ್’ ಹಾಗೂ ದುವಾಗೆ ನೇತೃತ್ವ ನೀಡಿದರು.

ಬಳಿಕ ಇತ್ತೀಚೆಗೆ ನಿಧನರಾದ ಸುಳ್ಯದ ಹಿರಿಯ ಸಾಮಾಜಿಕ ಮುಂದಾಳು ಹಾಗೂ ಹಿರಿಯ ಉದ್ಯಮಿಯಾಗಿದ್ದ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ಸ್ ಅವರಿಗೆ ತಹಲೀಲ್ ಸಮರ್ಪಿಸಲಾಯಿತು.
ಅನ್ಸಾರಿಯಾ ಯುಎಇ ಸಮಿತಿಯ ಅಧ್ಯಕ್ಷರಾದ ಝೈನುದ್ದೀನ್ ಬೆಳ್ಳಾರೆಯವರು ಮಾತನಾಡಿ, ಅಬ್ಬಾಸ್ ಹಾಜಿ ಅವರ ನಿಧನವು ಸುಳ್ಯದ ಜನತೆಗೆ ತುಂಬಲಾರದ ನಷ್ಟ. ಸುಳ್ಯ ದಲ್ಲಿ ಸರ್ವಧರ್ಮದವರು ಸಹಬಾಳ್ವೆಯಿಂದ ಜೀವನ ನಡೆಸಲು ಅಬ್ಬಾಸ್ ಹಾಜಿಯವರ ಮುಂದಾಳತ್ವ ಪ್ರಮುಖ ಪಾತ್ರ ವಹಿಸಿತ್ತು ಎಂದು ಹೇಳಿದರು.

ಸುಳ್ಯದ ಅನ್ಸಾರಿಯಾದ ವಠಾರದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್ ಕಟ್ಟಡದ ಕಾಮಗಾರಿ ಸಾಧ್ಯವಾದಷ್ಟು ವೇಗದಲ್ಲಿ ಪೂರ್ತಿಗೊಳಿಸಲು ಸರ್ವರ ಸಹಕಾರ ಕೋರಿದರು.
ನಾಸಿರ್ ಜಟ್ಟಿಪ್ಪಳ್ಳ ಸ್ವಾಗತಿಸಿ, ಮುಖ್ತಾರ್ ಅರಂತೋಡು ವಂದನಾರ್ಪಣೆ ಮಾಡಿದರು. ಸಮಿತಿಯ ಪ್ರಮುಖರಾದ ಮುಹಮ್ಮದ್ ಇಂಜಿನಿಯರ್ ಮೇನಾಲ, ಖಜಾಂಚಿ ಮುನೀರ್ ಜಟ್ಟಿಪ್ಪಳ್ಳ, ಗೌರವಾಧ್ಯಕ್ಷರಾದ ಹಮೀದ್ ಕೆಯು, ಹಮೀದ್ ಪೆರಾಜೆ ಕಬಾಯಿಲ್, ಅಜ್ಮಾನ್ ಯುನಿಟ್ ಅಧ್ಯಕ್ಷರಾದ ಅಝೀಝ್ ಕುಂಬಕ್ಕೋಡು, ಅಬುಧಾಬಿ ಯುನಿಟ್ ಅಧ್ಯಕ್ಷರಾದ ಲತೀಫ್ ನ್ಯಾಷನಲ್, ಅಜ್ಮಾನ್ ಜಿಎಂಸಿ ಗ್ರೂಪ್, ಮೊಯ್ದೀನ್ ಕಬಾಯಿಲ್, ರಫೀಕ್ ಜಟ್ಟಿಪ್ಪಳ್ಳ ಸೇರಿ ಸುಳ್ಯ ತಾಲೂಕಿನ ಹಲವಾರು ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಖ್ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago