ಸುದ್ದಿಗಳು

ಅನ್‌ ಲಾಕ್‌ 3.0 ಮಾರ್ಗಸೂಚಿ ಬಿಡುಗಡೆಗೊಳಿಸಿದ ಕೇಂದ್ರ ಸರಕಾರ: ಆ.‌31 ರವರೆಗೆ ಶಾಲಾ ಕಾಲೇಜು ಬಂದ್

Share

ನವದೆಹಲಿ: ಕೊರೊನಾ ಸೋಂಕಿನ ನಿಯಂತ್ರಣಕ್ಕೋಸ್ಕರ ದೇಶಾದ್ಯಂತ ಹೇರಲಾಗಿದ್ದ ಲಾಕ್ಡೌನ್‌ ಹಂತ ಹಂತವಾಗಿ ಅನ್‌ ಲಾಕ್‌ ಆಗುತ್ತಿದ್ದು, ದೇಶಾದ್ಯಂತ ಅನ್ವಯವಾಗುವ ಅನ್‌ಲಾಕ್ 3.0 ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಬುಧವಾರ ಸಂಜೆ ಪ್ರಕಟಿಸಿದೆ.

ಅದರ ಪ್ರಕಾರ ಶಾಲೆ, ಕಾಲೇಜು, ಇತರ ಶೈಕ್ಷಣಿಕ ಸಂಸ್ಥೆಗಳು, ಕೋಚಿಂಗ್ ಕ್ಲಾಸ್‌ಗಳು ಆ. 31ರವರೆಗೆ ತೆರೆಯಲು ಅನುಮತಿ ಇಲ್ಲ. ಆನ್‌ಲೈನ್ ಶಿಕ್ಷಣ, ದೂರ ಶಿಕ್ಷಣಕ್ಕೆ ಅನುಮತಿ ನೀಡುವುದಲ್ಲದೇ ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಈವರೆಗೆ ಇದ್ದ ನೈಟ್‌ ಕರ್ಫ್ಯೂ ಅನ್ನು ರದ್ದು ಮಾಡಲಾಗಿದೆ. ಅದಲ್ಲದೇ ಮೆಟ್ರೋ ಸಂಚಾರ ಹಾಗೂ ಅಂತರಾಜ್ಯ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಿನಿಮಾ ಹಾಲ್, ಸ್ವಿಮಿಂಗ್ ಪೂಲ್, ಬಾರ್, ಆಡಿಟೋರಿಯಂ ಮುಂತಾದವುಗಳನ್ನೂ ತೆರೆಯುವಂತಿಲ್ಲ. ಯೋಗ ಸಂಸ್ಥೆಗಳು ಮತ್ತು ಜಿಮ್‌ಗಳನ್ನು ಆ. 5ರ ಬಳಿಕ ತೆರೆಯಬಹುದು. ಇದಕ್ಕಾಗಿ ಪ್ರತ್ಯೇಕ ನಿಯಮಗಳನ್ನು ಕೇಂದ್ರ ಸರಕಾರ ಸದ್ಯದಲ್ಲೇ ಹೊರಡಿಸಲಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

2 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

3 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

4 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

4 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

4 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

4 hours ago