Advertisement
ರಾಷ್ಟ್ರೀಯ

ಅನ್ ಲಾಕ್-2.0 | ಗರೀಬ್ ಕಲ್ಯಾಣ್ ಯೋಜನೆ ಮುಂದಿನ 5 ತಿಂಗಳವರೆಗೆ ವಿಸ್ತರಣೆ | ಲಾಕ್ಡೌನ್​ ಸಡಿಲಿಕೆ ವೇಳೆ ನಿರ್ಲಕ್ಷ್ಯ ಬೇಡ | ಪ್ರಧಾನಿ ನರೇಂದ್ರ ಮೋದಿ ಕರೆ

Share

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹರಡುವುದು ತಡೆಗೆ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ವಿವಿಧ ಕ್ರಮಗಳ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಬಡವರು ಹಸಿವಿನಿಂದ ಬಳಲಬಾರದು ಎಂಬ ಕಾರಣದಿಂದ  ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ತಿಂಗಳವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಕೆಲವು ತಿಂಗಳುಗಳಿಂದ ದೇಶದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರದಿಂದ ಹಣವನ್ನು ಜಮೆ ಮಾಡಲಾಗಿದೆ. ಇದೀಗ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಮತ್ತು ಗೋಧಿ ಹಾಗೂ 1 ಕೆಜಿ ಬೇಳೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ   ಎಂದರು.

ಜೂನ್​ 1 ರಿಂದ ದೇಶದಲ್ಲಿ  ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ.  ಅನ್​ಲಾಕ್​.1 ರಲ್ಲಿ ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿಕೊಂಡು ಬರಲಾಯಿತು. ಆದರೆ, ಈ ವೇಳೆ ಜನರು ಹೆಚ್ಚು ನಿರ್ಲಕ್ಷತನ ತೋರಿದರು. ಸಾಮಾಜಿಕ ಅಂತರ ಮರೆತರು. ಇದಕ್ಕೂ ಮುನ್ನ ನಾವು ಜನರಿಗೆ ಮಾಸ್ಕ್​ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಹಾಗೂ ದಿನದಲ್ಲಿ ಹಲವು ಬಾರಿ 20 ಸೆಕೆಂಡ್ ಕೈ ತೊಳೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಿದ್ದೆವು. ಆದರೆ, ಜನರು ಇವುಗಳನ್ನು ಸರಿಯಾಗಿ ಪಾಲನೆ ಮಾಡಲೇ ಇಲ್ಲ ಎಂದು ಪ್ರಧಾನಿಗಳು ವಿಷಾದ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.ದೇಶದಲ್ಲಿ ಮತ್ತೆ ಲಾಕ್​ಡೌನ್​ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ  ಪ್ರಧಾನಿಗಳು ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

15 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

24 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago