Advertisement
ರಾಷ್ಟ್ರೀಯ

ಅನ್ ಲಾಕ್-2.0 | ಗರೀಬ್ ಕಲ್ಯಾಣ್ ಯೋಜನೆ ಮುಂದಿನ 5 ತಿಂಗಳವರೆಗೆ ವಿಸ್ತರಣೆ | ಲಾಕ್ಡೌನ್​ ಸಡಿಲಿಕೆ ವೇಳೆ ನಿರ್ಲಕ್ಷ್ಯ ಬೇಡ | ಪ್ರಧಾನಿ ನರೇಂದ್ರ ಮೋದಿ ಕರೆ

Share

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹರಡುವುದು ತಡೆಗೆ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ವಿವಿಧ ಕ್ರಮಗಳ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಬಡವರು ಹಸಿವಿನಿಂದ ಬಳಲಬಾರದು ಎಂಬ ಕಾರಣದಿಂದ  ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ತಿಂಗಳವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಕೆಲವು ತಿಂಗಳುಗಳಿಂದ ದೇಶದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರದಿಂದ ಹಣವನ್ನು ಜಮೆ ಮಾಡಲಾಗಿದೆ. ಇದೀಗ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಮತ್ತು ಗೋಧಿ ಹಾಗೂ 1 ಕೆಜಿ ಬೇಳೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ   ಎಂದರು.

ಜೂನ್​ 1 ರಿಂದ ದೇಶದಲ್ಲಿ  ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ.  ಅನ್​ಲಾಕ್​.1 ರಲ್ಲಿ ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿಕೊಂಡು ಬರಲಾಯಿತು. ಆದರೆ, ಈ ವೇಳೆ ಜನರು ಹೆಚ್ಚು ನಿರ್ಲಕ್ಷತನ ತೋರಿದರು. ಸಾಮಾಜಿಕ ಅಂತರ ಮರೆತರು. ಇದಕ್ಕೂ ಮುನ್ನ ನಾವು ಜನರಿಗೆ ಮಾಸ್ಕ್​ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಹಾಗೂ ದಿನದಲ್ಲಿ ಹಲವು ಬಾರಿ 20 ಸೆಕೆಂಡ್ ಕೈ ತೊಳೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಿದ್ದೆವು. ಆದರೆ, ಜನರು ಇವುಗಳನ್ನು ಸರಿಯಾಗಿ ಪಾಲನೆ ಮಾಡಲೇ ಇಲ್ಲ ಎಂದು ಪ್ರಧಾನಿಗಳು ವಿಷಾದ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.ದೇಶದಲ್ಲಿ ಮತ್ತೆ ಲಾಕ್​ಡೌನ್​ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ  ಪ್ರಧಾನಿಗಳು ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

2 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

10 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

11 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

12 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago